TTK Group
News & Updates
ಕಳೆದ ವರ್ಷ ನಡೆದ ಅಂಗಾಂಗ ದಾನಗಳಿಂದಾಗಿ 389 ಜನರಿಗೆ ಮರು ಜೀವ…!
ರಾಜ್ಯದಲ್ಲಿ ಅಂಗಾಂಗ ದಾನ ಹೆಚ್ಚುತ್ತಿದ್ದು, ಕಳೆದ ವರ್ಷ ನಡೆದ ಅಂಗಾಂಗ ದಾನಗಳಿಂದಾಗಿ 389 ಜನರು ಮರು ಜೀವ ಪಡೆದಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಬೆಂಗಳೂರು ಮೆಡಿಕಲ್ ಸರ್ವಿಸಸ್ ಟ್ರಸ್ಟ್-BMST ಯಿಂದ ಆಯೋಜಿಸಿದ್ದ, ʼಅನ್ಸಂಗ್ ಹೀರೋಸ್ʼ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಅಂಗಾಂಗ ದಾನದ ನಿರ್ವಹಣೆಗೆ ರಾಜ್ಯದಲ್ಲಿ ಸೊಟ್ಟೊ ಎಂಬ ಸಂಸ್ಥೆ ಇದೆ. ಕಳೆದ ಮೂರು ವರ್ಷಗಳಲ್ಲಿ ಅಂಗಾಂಗ ದಾನಕ್ಕೆ ಹೆಚ್ಚು ಒತ್ತು ನೀಡಿ ಜನರಲ್ಲಿ ಜಾಗೃತಿ ಮೂಡಿಸಲಾಗಿದೆ. ಇದರಿಂದ ಅಂಗಾಂಗ ದಾನದ ಪ್ರಮಾಣ ಹೆಚ್ಚಾಗಿದೆ. ಅಂಗಾಂಗ ದಾನ ಮಾಡುವವರು ಸಾವಿನ ನಂತರವೂ ಮತ್ತೊಬ್ಬರ ಬದುಕಿಗೆ ದಾರಿ ದೀಪವಾಗಿ ಜೀವಿಸುತ್ತಾರೆ. ಇಂತಹ ಪುಣ್ಯದ ಕೆಲಸ ಮತ್ತೊಂದಿಲ್ಲ. ಕಳೆದ ವರ್ಷ ಅಂಗಾಂಗ ದಾನದಿಂದಾಗಿ 389 ಜನರು ಮರು ಜೀವ ಪಡೆದಿದ್ದಾರೆ. ಕೋವಿಡ್ ಸಮಯದಲ್ಲಿ ಕೂಡ ಜಾಗೃತಿ ಕಾರ್ಯಕ್ರಮಗಳಿಂದಾಗಿ ಅಂಗಾಂಗ ದಾನ ನಡೆದಿದೆ. ಹಾಗೆಯೇ ದಾನಕ್ಕೆ ಹೆಸರು ನೋಂದಣಿ ಪ್ರಕ್ರಿಯೆ ಕೂಡ ನಡೆದಿದೆ ಎಂದು ವಿವರಿಸಿದರು.
Other News and Updates

Apr 11, 2023
TTK Prestige launches the new Endura 1000W Mixer-Grinder

Mar 30, 2023
TTK Prestige launches the new Endura 1000W Mixer-Grinder

Mar 30, 2023
TTK Prestige launches the new Endura 1000W Mixer-Grinder

Mar 30, 2023
TTK Prestige launches the new Endura 1000W Mixer-Grinder

Mar 30, 2023
TTK Prestige launches the new Endura 1000W Mixer-Grinder
